Empowering Youth
Category JLGs

Narayana_gowda Narayan-gowda.png

ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ ಎರಡು ಸ್ವಾಮಿ ವಿವೇಕಾನಂದ ಸ್ವಸಹಾಯ ಗುಂಪುಗಳ ರಚನೆಗೆ ಆದೇಶ ಹೊರಡಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.

ರಾಜ್ಯದ ಪ್ರತಿ ಗ್ರಾಮ ಪಂಚಾಯತ್‌ನಲ್ಲಿ ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಯುವ ಸ್ವಸಹಾಯ ಸಂಘ ಸ್ಥಾಪಿಸಿ, ಸ್ವಯಂ ಉದ್ಯೋಗ ಕೈಗೊಳ್ಳುವುದಕ್ಕೆ ನೆರವು ನೀಡಲು ಈಗಾಗಲೇ ಆದೇಶ ಹೊರಡಿಸಲಾಗಿದೆ. ಮೊದಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಒಂದು ಗುಂಪಿನಂತೆ 6000 ಗುಂಪುಗಳನ್ನು ರಚಿಸಲು ಆದೇಶಿಸಲಾಗಿತ್ತು. ಸ್ವಾಮಿ ವಿವೇಕಾನಂದ ಯುವ ಸ್ವಸಹಾಯ ಗುಂಪುಗಳ ರಚನೆಗೆ ಉತ್ತಮ ಸ್ಪಂದನೆ ಸಿಕ್ಕಿದ್ದರಿಂದ ಪ್ರತಿ ಪಂಚಾಯತ್ ಗೆ ಎರಡರಂತೆ 12 ಸಾವಿರ ಗುಂಪುಗಳನ್ನು ರಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದ್ದರು. ಅದರಂತೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಪ್ರತಿ ಗುಂಪಿಗೆ 10 ಸಾವಿರ ರೂಪಾಯಿ ಸುತ್ತುನಿಧಿ, ಒಂದು ಲಕ್ಷ ಸಬ್ಸಿಡಿಯೊಂದಿಗೆ ಐದು ಲಕ್ಷ ರೂಪಾಯಿ ಸಾಲ ಸೌಲಭ್ಯ ಒದಗಿಸಲಾಗುತ್ತಿದೆ.. ಸ್ಥಳೀಯ ಬೇಡಿಕೆಯನ್ನಾಧರಿಸಿ ಎಲ್ಲಾ ಸ್ವಸಹಾಯಗಳ ಕಾರ್ಯಚಟುವಟಿಕೆ ಆರಂಭಿಸಿ 12 ಸಾವಿರ ಯುವ ಸಂಘಗಳನ್ನು ನವೋದ್ಯಮಗಳಾಗಿ ಪರಿವರ್ತಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಇದರಿಂದ ರಾಜ್ಯದಲ್ಲಿ 5 ಲಕ್ಷಕ್ಕೂ ಅಧಿಕ ಯುವಕರು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಲು ನೆರವಾಗುತ್ತದೆ. ಈ ಯೋಜನೆಯನ್ನು ನಮ್ಮ ಇಲಾಖೆ ನೇತೃತ್ವದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಯುವಕರ ಸಬಲೀಕರಣಕ್ಕೆ ಒತ್ತು ನೀಡಲಾಗುತ್ತದೆ. ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮಕ್ಕೆ ಒಂದರಂತೆ ಸುಮಾರು 28 ಸಾವಿರ ಸ್ವಾಮಿ ವಿವೇಕಾನಂದ ಯುವ ಸ್ವಸಹಾಯ ಗುಂಪುಗಳನ್ನು ರಚಿಸುವ ಗುರಿ ಹೊಂದಲಾಗಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.